KRGRV
Sunday, August 2, 2026
Homeರಾಜ್ಯಗೃಹಜ್ಯೋತಿ ಪರಿಶೀಲನೆಗೆ ಆಗಸ್ಟ್‌ 31ರವರೆಗೆ ಗಡುವು ವಿಸ್ತರಣೆ

ಗೃಹಜ್ಯೋತಿ ಪರಿಶೀಲನೆಗೆ ಆಗಸ್ಟ್‌ 31ರವರೆಗೆ ಗಡುವು ವಿಸ್ತರಣೆ

ಬೆಂಗಳೂರು, ಆ. 1: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಪ್ರಕ್ರಿಯೆಗೆ ನೀಡಲಾಗಿದ್ದ ಗಡುವನ್ನು 2026ರ ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ.

ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ತಮ್ಮ ವಿವರಗಳ ಪರಿಶೀಲನೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ. ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಂದ ಪರಿಶೀಲನೆ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಈ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.

ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಸಮೀಪದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳು ಅಥವಾ ಸಂಬಂಧಿತ ವಿದ್ಯುತ್ ಸರಬರಾಜು ಸಂಸ್ಥೆಗಳ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿಸಿಕೊಳ್ಳಬಹುದು.

ನಿಗದಿತ ಗಡುವಿನೊಳಗೆ ಪರಿಶೀಲನೆ ಪೂರ್ಣಗೊಳಿಸದಿದ್ದಲ್ಲಿ ಯೋಜನೆಯ ಸೌಲಭ್ಯ ಪಡೆಯುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ, ಯಾವುದೇ ವಿಳಂಬ ಮಾಡದೆ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸರ್ಕಾರದ ಈ ನಿರ್ಧಾರದಿಂದ ಲಕ್ಷಾಂತರ ಗೃಹಜ್ಯೋತಿ ಫಲಾನುಭವಿಗಳಿಗೆ ಹೆಚ್ಚುವರಿ ಸಮಯ ದೊರೆತಿದ್ದು, ಬಾಕಿ ಇರುವ ಪರಿಶೀಲನಾ ಕಾರ್ಯವನ್ನು ಸುಲಭವಾಗಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಸುದ್ದಿ