KRGRV
Friday, August 7, 2026
Homeರಾಜಕೀಯಸಿಎಂ‌ ರಾಜೀನಾಮೆ ನೀಡುವಂತೆ ವಿಜಯೇಂದ್ರ ಆಗ್ರಹ

ಸಿಎಂ‌ ರಾಜೀನಾಮೆ ನೀಡುವಂತೆ ವಿಜಯೇಂದ್ರ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯಪಾಲರ ವಿರುದ್ಧ ದಬ್ಬಾಳಿಕೆ ಮಾಡೋದು ಬಿಟ್ಟು ಸಿಎಂ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು. ತಮ್ಮ ಬೆಂಬಲಕ್ಕೆ ಸಚಿವರು, ಶಾಸಕರು ನಿಲ್ಲುತ್ತಾರೆ ಎನ್ನೋ ಭಂಡತನ ಬಿಡಿ. ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಆಗ್ರಹಿಸಿದ್ರು.

ಹೆಚ್ಚಿನ ಸುದ್ದಿ