KRGRV
Monday, August 10, 2026
Homeರಾಜಕೀಯಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧದ ಆರೋಪ; ಕಾಂಗ್ರೆಸ್‌ನಿಂದ ತನಿಖೆಗೆ ಆಗ್ರಹಿಸಿ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧದ ಆರೋಪ; ಕಾಂಗ್ರೆಸ್‌ನಿಂದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಮತ್ತು ಜೀವ ಬೆದರಿಕೆ ಹಾಕಿರುವುದಾಗಿ ಗಂಭೀರ ಆರೋಪ ಮಾಡಿದ್ದು, ಈ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ತಕ್ಷಣವೇ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಮಹಿಳೆಯ ಮೇಲೆ ನಡೆದಿರುವ ದೌರ್ಜನ್ಯದ ಆರೋಪಗಳ ಕುರಿತು ಪೊಲೀಸ್ ತಾನಖಾ ಸಂಸ್ಥೆಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸತ್ಯಾಸತ್ಯತೆಯನ್ನು ಹೊರತರಬೇಕು ಎಂದು ಆಗ್ರಹಿಸಲಾಯಿತು.

ಪ್ರಮುಖ ಮುಖ್ಯಾಂಶಗಳು:

  • ವಂಚನೆ ಮತ್ತು ಗಂಭೀರ ಆರೋಪಗಳು: ಗೋಪಾಲ್ ಜೋಶಿ ವಿರುದ್ಧ ಈಗಾಗಲೇ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಹೆಸರಿನಲ್ಲಿ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬಹಿರಂಗಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಹಾಕಿರುವುದಾಗಿ ಗಂಭೀರ ದೂರು ನೀಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜಕೀಯ ಬಣ್ಣ ಬೇಡ – ನ್ಯಾಯವೇ ಮುಖ್ಯ: ಈ ಪ್ರಕರಣವನ್ನು ಯಾವುದೇ ರಾಜಕೀಯ ಬಣ್ಣದಲ್ಲಿ ನೋಡದೆ, ಸಂತ್ರಸ್ತ ಮಹಿಳೆಗೆ ಕಾನೂನಿನ ಮೂಲಕ ಶೀಘ್ರವಾಗಿ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಾವಲುಗಾರರೇ ಆದರೂ ಕಾನೂನು ಎಲ್ಲರಿಗೂ ಒಂದೇ: ಆರೋಪಿತರು ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸ್ಪಷ್ಟ ಸಂದೇಶವನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆ ರವಾನಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರಾದ ಜಿ. ಪ್ರಕಾಶ್, ಹೇಮರಾಜ್, ಪುಟ್ಟರಾಜು, ಕುಶಾಲ್ ಹರುವೇಗೌಡ, ರಂಜೀತ್ ಕುಮಾರ್, ಆನಂದ್, ಮಾಧವಹನೂರು, ಪ್ರವೀಣ್ ರಾವ್, ಒಬಳೇಶ್ ಮತ್ತು ಪವನ್ ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ