KRGRV
Thursday, November 13, 2025
Homeಜಿಲ್ಲಾ ಸುದ್ದಿಗಳುಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ,(ಆಗಸ್ಟ್ 18): ಸಿದ್ಧರಾಮಯ್ಯನವರನ್ನು (Siddaramaiah) ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಿ ಡಿ.ಕೆ.ಶಿವಕುಮಾರ್ (DK Shivakumar) ರಾಜ್ಯದ ಸೂಪರ್ ಸಿಎಂ ಆಗಲಿದ್ದಾರೆ. ದೆಹಲಿಯಲ್ಲಿ ಡಿಕೆ ಶಿವಕುಮಾರ್ ಯಾರ್ಯಾರ ಮನೆಗೆ ತೆರಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯಿದೆ. ಸಿದ್ದರಾಮಯ್ಯರವರನ್ನು ಇಳಿಸುವುದಕ್ಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲಾ ಮಾಹಿತಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಇಂದು (ಆಗಸ್ಟ್ 18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಎಲ್ಲಾ ಇಲಾಖೆಗಳ ಸಭೆಯನ್ನು ಕರೆಯಲು ಅವಕಾಶವಿರುತ್ತದೆ, ಉಪ ಮುಖ್ಯಮಂತ್ರಿಗೆ ಆ ಅಧಿಕಾರವಿರುವುದಿಲ್ಲ. ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಸುಮ್ಮನೆ ಕುಳಿತಿದ್ದಾರಷ್ಟೇ ಅವರದ್ದೇನು ನಡೆಯುವುದಿಲ್ಲ ಎಂದಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರವರಿಗೇ ಹೆಚ್ಚಿನ ಶಾಸಕರ ಬೆಂಬಲವಿದೆ. ಆದ್ರೆ, ಡಿಕೆ ಶಿವಕುಮಾರ್​​ಗೆ ಶಾಸಕ ಬೆಂಬಲವಿರುವುದು ಕೇವಲ 15 ಮಾತ್ರ. ಪಕ್ಷದಲ್ಲಿ ಸಿದ್ದರಾಮಯ್ಯರವರ ವರ್ಚಸ್ಸನ್ನು ಕಡಿಮೆ ಮಾಡುವ ಉದ್ದೇಶದಿಂದ ಪಕ್ಷಾಂತರದ ಹೊಸ ಗೇಮ್ ಆಡುತ್ತಿದ್ದಾರೆ, ಇದು ಸಿಎಂ ಪಟ್ಟವೇರಲು ಡಿಕೆ ಶಿವಕುಮಾರ್​ ಪ್ಲಾನ್ ಎಂದು ಪಕ್ಷಾಂತರಕ್ಕೆ ಹೊಸ ತಿರುವನ್ನು ನೀಡಿದ್ದಾರೆ.

ಹೆಚ್ಚಿನ ಸುದ್ದಿ